ಕೊರೊನಾ ವೈರಸ್‌ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂಬಾಕು ಮತ್ತು ಗುಟ್ಕಾವನ್ನು ನಿಷೇದಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ‌ ತಂಬಾಕು ಸೇವನೆ ಮಾಡಿದ್ರೆ ಐಪಿಸಿ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸುವಂತೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂಬಾಕು ಮತ್ತು ಗುಟ್ಕಾವನ್ನು ನಿಷೇದಿಸಲಾಗಿದೆ.
ಪ್ರತಿ ವರ್ಷ ಮೇ31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದೆ. ಭಾನುವಾರು ವಿಶ್ವ ತಂಬಾಕು ರಹಿತ ದಿನ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನ್ನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ‌ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ತೆಗೆುಕೊಳ್ಳಲಾಗುವುದು.ಐಪಿಸಿ ಸೆಕ್ಷನ್ 188, 268, 269, 270 ಅಡಿ ಕೇಸ್ ದಾಖಲಿಸಲಾಗುವುದು ಎಂದು ಶ್ರೀರಾಮುಲು ಹೇಳಿದ್ದಾರೆ.
ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳನ್ನು ಜಗಿದು ಕಂಡಕಂಡಲ್ಲಿ ಉಗಿಯುವುದರಿಂದ ಕೊರೊನಾ ವೈರಸ್‌ ಮತ್ತಷ್ಟು ವ್ಯಾಪಕವಾಗಿ ಹರಡುವ ಅಪಾಯವಿದೆ. ಹೀಗಾಗಿ ರಾಜ್ಯಾದ್ಯಂತ ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳ ಮೇಲೆ ನಿಷೇಧ ಹೇರಲಾಗಿದೆ.


- FOR ADVERTISEMENT CONTACT -                           9902523698