ಬನಹಟ್ಟಿಯ ಕಾಡಸಿದ್ಧೇಶ್ವರ ದೇವಸ್ಥಾನದಲ್ಲಿ ಶಾಸಕ ಸಿದ್ದು ಸವದಿ ಕೆಎಚ್ಡಿಸಿ ನಿಮಗದ ಅಧ್ಯಕ್ಷ ಸ್ಥಾನ ಸ್ವೀಕರಿಸುವ ನಿಮಿತ್ತವಾಗಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಸವದಿ ದಂಪತಿಗಳಿಂದ ವಿಶೇಷ ಪೂಜೆ
ರಬಕವಿ-ಬನಹಟ್ಟಿ,ಅ17: ತೇರದಾಳ ಶಾಸಕ ಸಿದ್ದು ಸವದಿ ಬುಧವಾರ ಹುಬ್ಬಳ್ಳಿಯ ಕೆಎಚ್ಡಿಸಿ ನಿಗಮದ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನ ಸ್ವೀಕರಿಸಲಿದ್ದು, ಸೋಮವಾರ ದಂಪತಿ ಸಮೇತವಾಗಿ ಕಾಡಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪತ್ರಿಕೆಯ ಜೊತೆಗೆ ಮಾತನಾಡಿ, ಮಂಗಳವಾರ ಮಧ್ಯಾಹ್ನೆ 12 ಗಂಟೆಗೆ ಅಧಿಕಾರ ಸ್ವೀಕರಿಸುತ್ತೇನೆ. ಇಡೀ ರಾಜ್ಯದಲ್ಲಿ ನೇಕಾರಿಕೆ ವೃತ್ತಿಯನ್ನು ಅವಲಂಬಿಸಿದ ಸಾವಿರಾರು ಕುಟುಂಬಗಳು ತೇರದಾಳ ತಾಲ್ಲೂಕಿನಲ್ಲಿವೆ. ಈಗಾಗಲೇ ರಾಜ್ಯ ಸರ್ಕಾರವನ್ನು ಆಗ್ರಹಿಸಿ ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಒಂದು ಕ್ಷೇತ್ರವನ್ನು ಪ್ರತಿನಿಧಿಸುವುದಕ್ಕೆ ಹೆಮ್ಮೆ ಎನಿಸುತ್ತದೆ.
ಇನ್ನೂ ಮುಂದಿನ ದಿನಗಳಲ್ಲಿ ಕೆಎಚ್ಡಿಸಿ ನಿಮಗದ ಜೊತೆಗೆ ನೇಕಾರಿಕೆಯನ್ನು ಅವಲಂಬಿಸಿದ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುವೆ. ನೇಕಾರರು ಆರ್ಥಿಕವಾಗಿ ಸಬಲರಾಗುವಂತೆ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಸವದಿ ತಿಳಿಸಿದರು.
ಈ ಸಂದರ್ಭದಲ್ಲಿ ಪತ್ನಿ ಮೀನಾಕ್ಷಿ ಮತ್ತು ಮಗ ವಿದ್ಯಾಧರ ಇದ್ದರು.
ಜಾಹಿರಾತು...
Social Plugin