(ಸ್ವರೂಪ ಸಂದರ್ಶನ ವರದಿ : ಮ.ಕೃ.ಮೇಗಾಡಿ)
ತೇರದಾಳ : ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ಜಾನಪದ ಪರಿಷತ್ತು ಬಾಗಲಕೋಟೆ ಜಿಲ್ಲಾ ಘಟಕದಿಂದ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಸಾಧನೆಗೈದ ಜಾನಪದ ಕಲಾವಿದರು, ಸಾಹಿತಿಗಳು, ಸಾಂಸ್ಕøತಿಕ ಸಂಘಟನೆಗಳ ಪ್ರಮುಖರು, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಶಿವಾನದ ಶೆಲ್ಲಿಕೇರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಳ ಕಾರ್ಯಕ್ರಮದ ಸ್ಥಳ ಹಾಗೂ ದಿನಾಂಕ ನಂತರ ಪ್ರಕಟಿಸಲಾಗುವುದು. ಎಸ್ಎಸ್ಎಲ್ಸಿಯಲ್ಲಿ ಪ್ರತಿಶತ 75ರಷ್ಟು ಹಾಗೂ ಪಿಯುಸಿಯಲ್ಲಿ ಪ್ರತಿಶತ 65ರಷ್ಟು ಸಾಧನೆಗೈದಿರುವ ಜಾನಪದ ಕಲಾವಿದರು, ಸಾಹಿತಿಗಳು, ಸಾಂಸ್ಕøತಿಕ ಸಂಘಟನೆಗಳ ಪ್ರಮುಖರು, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಆಯಾ ತಾಲೂಕಾ ಅಧ್ಯಕ್ಷರುಗಳು, ವಲಯಾಧ್ಯಕ್ಷರುಗಳ ಕಡೆಗೆ ದ್ವಿಪ್ರತಿಯಲ್ಲಿ ಅಂಕಪಟ್ಟಿ ಝರಾಕ್ಸ್ ಪ್ರತಿ, ಮೊಬೈಲ್ ನಂಬರ್, ವಿಳಾಸದೊಂದಿಗೆ ಮಾಹಿತಿ ನೀಡಲು ಕೋರಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತು ರಬಕವಿ-ಬನಹಟ್ಟಿ ತಾಲೂಕಾ ಘಟಕದ ಅಧ್ಯಕ್ಷ ಮ.ಕೃ.ಮೇಗಾಡಿ, ಮುಧೋಳ ತಾಲೂಕಾ ಕಜಾಪ ಅಧ್ಯಕ್ಷ ಆನಂದ ಪೂಜಾರಿ, ಎಸ್.ಎಸ್.ಪುರವಾರ ಈ ಸಂದರ್ಭದಲ್ಲಿದ್ದರು.
ಜಾಹಿರಾತು...
Social Plugin