ರಬಕವಿ-ಬನಹಟ್ಟಿ ಸಮುದಾಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹೊರ ಗುತ್ತಿಗೆ ಹಾಗು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ನಡೆದ ಮುಷ್ಕರವು 14 ನೇ ದಿನವೂ ಮುನ್ನಡೆದಿತ್ತು. ರವಿವಾರ ತೇರದಾಳ ಶಾಸಕ ಸಿದ್ದು ಸವದಿ ಕಚೇರಿ ಆವರಣದಲ್ಲಿ ಮನವಿ ಸಲ್ಲಿಸುವ ಮೂಲಕ ತಮ್ಮ ಪ್ರತಿಭಟನೆ ನಡೆಸಿದರು.