ದಿನಾಂಕ 06-08-2021 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ನಮ್ಮ ಅಚ್ಚುಮೆಚ್ಚಿನ ನಾಯಕರಾದ *ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು* ಕೋವಿಡ್‌ನಿಂದ ತೊಂದರೆಗೀಡಾದ ಅಂಗವಿಕಲರಿಗೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ದಿನಸಿ ಕಿಟ್‌ಗಳನ್ನು ವಿತರಣೆ ಮಾಡಿದರು.ಹಾಗೆ 
 ‘ಕೋವಿಡ್ ಲಾಕ್‌ಡೌನ್‌ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ ರೀತಿ ಅಂಗವಿಕಲರು ಕೂಡ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ವತಿಯಿಂದ ಅವರಿಗೆ ನೆರವು ಕಲ್ಪಿಸಲಾಗಿದೆ’ ಎಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀ ವೀರಕುಮಾರ ಪಾಟೀಲ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿನಯ ಅಣ್ಣಾ ನಾವಲಗಟ್ಟಿ *ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್‌ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿಯವರು* ಶ್ರೀ ಹಬೀಬ್ ಸೀಲೆದಾರ ಕಾಂಗ್ರೆಸ್ ಹಿರಿಯ ಮುಖಂಡರು. ಯುವ ಕಾಂಗ್ರೆಸ್ ಮುಖಂಡರು.ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- ವರದಿ : ಮಲ್ಲಿಕಾರ್ಜುನ ಘೋಸರವಾಡ