ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೆ 50 ರಿಂದ 100 ಕೋಟಿ ರೂಪಾಯಿಗಳವರಿಗೆ ಅಭಿವೃದ್ಧಿಗಾಗಿ ಅನುದಾನ ನೀಡಿದ್ದಾರೆ. ಅದರಂತೆ ನಮ್ಮ ಕ್ಷೇತ್ರಕ್ಕೂ ಸಹ ರಸ್ತೆಗಳ ಸುಧಾರಣೆಗಾಗಿ ಹಣ ಬಿಡುಗಡೆ ಮಾಡಿದ್ದಾರೆ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಮೂಡಲಗಿ ಪಟ್ಟಣದ ಅಭಿವೃದ್ಧಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ ಅವರ ಮೂಲಕ ಹೆಚ್ಚಿನ ಅನುದಾನ ತರುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಕುಡಿಯುವ ನೀರಿಗಾಗಿ ಅರಭಾವಿ ಕ್ಷೇತ್ರಕ್ಕೆ 30ಕೋಟಿ ರೂಪಾಯಿ ಬಿಡುಗಡೆ :ಸಚಿವ ಭೈರತಿ ಬಸವರಾಜ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಬೇಕು, ನಾನು ಕೂಡಾ ಸಮಾಜದ ಮುಖಂಡನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ದಾಹ ಮುಕ್ತ ಮಾಡಲು 9 ಸಾವಿರಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಅರಭಾವಿ ಕ್ಷೇತ್ರಕ್ಕೆ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ 30 ಕೋಟಿ ರೂಪಾಯಿ ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಸಾನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮಿಜಿ ವಹಿಸಿದ್ದರು. ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ.ಶಶಿಧರ ಬಗಲಿ, ಜಿಲ್ಲಾನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ, ತಹಶೀಲ್ದಾರ ಡಿ.ಜಿ.ಮಹಾತ್. ಶಿವಾನಂದ ಬಬಲಿ. ಪರಸಪ್ಪ ನಾಯ್ಕ. ಸದಾಶಿವ ಹೊಸಮನಿ.ಸಂಜು ಅಗ್ನೇಪ್ಪಗೋಳ. ಭೀಮಶಿ ಮಗದುಮ್. ಹಣಮಂತ ತೇರದಾಳ. ಸಂತೋಷ ಸೋನಾವಲ್ಕರ. ಸುಭಾಸ ಪಾಟೀಲ. ಉಪನೋಂದಣಿ ಅಧಿಕಾರಿ ಹರಿಯಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವ ಆರ್.ಅಶೋಕ್ ಅವರಿಗೆ ಕೃಷ್ಣನ ಕಂಚಿನ ಪ್ರತಿಮೆ ಹಾಗೂ ಇನ್ನೋರ್ವ ಸಚಿವ ಬೈರತಿ ಬಸವರಾಜ ಅವರಿಗೆ ಬೆಳ್ಳಿ ಗಣೇಶನ ಮೂರ್ತಿಯನ್ನು ನೀಡಿ ಸತ್ಕರಿಸಿದರು.
ನಮ್ಮ ಬಿಜೆಪಿ ಸರಕಾರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪವರ್ ಫುಲ್ ಲೀಡರ್ ಎಂದ ಸಚಿವ ಆರ್.ಅಶೋಕ್ ಅವರು, ಬೆಂಗಳೂರಿಗೆ ಬಂದಾಗಲೆಲ್ಲ ಮುಖ್ಯಮಂತ್ರಿ ಸೇರಿದಂತೆ ಸಂಬಂಧ ಪಟ್ಟ ಹಲವಾರು ಮಂತ್ರಿಗಳನ್ನು ಭೇಟಿ ಮಾಡಿ ಅರಭಾವಿ ಅಭಿವೃದ್ಧಿ ಕೆಲಸಗಳಿಗೆ ಕಡತಗಳಿಗೆ ಅನುಮತಿ ಪಡೆದುಕೊಂಡೇ ಹೋಗುತ್ತಾರೆ.
– ಆರ್.ಅಶೋಕ್, ಕಂದಾಯ ಸಚಿವ
ನಮ್ಮ ಬಿಜೆಪಿ ಸರಕಾರ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿದೆ. ಬಾಕಿ ಉಳಿದಿರುವ ಐದು ತಿಂಗಳ ಅವಧಿಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಳ್ಳುತ್ತೇವೆ. ಮತ್ತೇ ಬಿಜೆಪಿ ಅಧಿಕಾರಕ್ಕೆರಲಿದ್ದು, ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

Social Plugin